ಕಲಾವಿದನಿಂದ ಕಲಾವಿದರಿಗಾಗಿ -ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು
{ವಿ.ಸೂ: ಇದು ಜೂನ್ 2016ರಲ್ಲಿ ಬರೆದ ಲೇಖನ. ಅದರಿಂದೀಚೆಗೆ ಆದ ಬೆಳವಣಿಗೆಗಳನ್ನು ಈ ಲೇಖನದಲ್ಲಿ ಸೇರಿಸಲಾಗಿಲ್ಲ} ಕಲಾವಿದನಿಂದ ಕಲಾವಿದರಿಗಾಗಿ ಚಿಗುರೊಡೆದ ಮೊತ್ತ ಮೊದಲ ಸಂಸ್ಥೆ ಎಂಬ ಹೆಗ್ಗಳಿಕೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ ಸಲ್ಲುತ್ತದೆ. ಖ್ಯಾತ ಭಾಗವತರಾದ ಶ್ರೀ ಪಟ್ಲ ಸತೀಶ್ ಶೆಟ್ಟಿ ಇದರ ಸ್ಥಾಪಕಾಧ್ಯಕ್ಷರು. ರಂಗದಲ್ಲಿ ಕಲಾವಿದನಾಗಿ ರಂಜಿಸುವುದರ ಜತೆಗೆ ಕಲೆಗೆ, ಕಲಾವಿದರಿಗಾಗಿ ಕೊಡುಗೆಗಳನ್ನು ನೀಡಬೇಕಾದುದು ಕಲಾವಿದರಿಗೆ ಕರ್ತವ್ಯವೂ ಹೌದು. ಈ ನಿಟ್ಟಿನಲ್ಲಿ ಪಟ್ಲ ಸತೀಶ್ ಶೆಟ್ಟಿಯವರು ಶ್ರಮಿಸುತ್ತಿದ್ದಾರೆ. ಶ್ರೀ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಲ್ಲಿ ಭಾಗವತಿಕೆಯನ್ನು ಕಲಿತ ಇವರು ಸತತ ಅಭ್ಯಾಸದಿಂದ ಎಳೆಯ ಪ್ರಾಯದಲ್ಲಿಯೇ ಪ್ರಸಿದ್ಧಿಯನ್ನು ಪಡೆದು ಕೀರ್ತಿಯ ಶಿಖರವನ್ನೇರಿದರು. ಪ್ರತಿಭೆಯಿದ್ದವರೆಲ್ಲಾ ಹೊಳೆದು ಕಾಣಿಸಿಕೊಳ್ಳಲಾರರು. ಪ್ರತಿಭೆಯ ಜೊತೆ ಯೋಗಭಾಗ್ಯಗಳು ಮೇಳೈಸಿದಾಗ ಆತ ಪ್ರಸಿದ್ಧನಾಗುತ್ತಾನೆ ಎಂಬುದಕ್ಕೆ ಇವರೇ ಸಾಕ್ಷಿ. ಭಾಗವತಿಕೆಯನ್ನಲ್ಲದೆ ಚೆಂಡೆ ಮದ್ದಳೆಯನ್ನೂ ನುಡಿಸಬಲ್ಲರು. ಶ್ರೀ ಪಟ್ಲ ಸತೀಶ್ ಶೆಟ್ಟಿಯವರಿಂದ ಕಲಾವಿದರಿಗಾಗಿ ಈ ತೆರನಾದ ಶ್ರೇಷ್ಟ ಕೊಡುಗೆಯಾದುದು ನಾವೆಲ್ಲರೂ ಹೆಮ್ಮೆ ಪಡಬೇಕಾದ ವಿಚಾರ. ಯಕ್ಷಗಾನ ಕಲೆಯ ಬಗ್ಗೆ, ಮೇಳವನ್ನು ನಡೆಸಿ ಅನುಭವವಿರುವ ಪಟ್ಲಗುತ್ತು ಮಹಾಬಲ ಶೆಟ್ಟರಿಗೆ ಪುತ್ರನಾಗಿ ಜನಿಸಿದ ಪಟ್ಲ ಸತೀಶ್ ಶೆಟ್ಟಿಯವರು ಈಗ ಕಲಾಭಿಮಾನಿಗಳಿಗೆ ಪ್ರೀತಿಯ ಸತೀಶಣ್ಣ. ತ